July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

ಉಜಿರೆ :ಜ್ಞಾನಶ್ರೀ
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿಕರಾವಳಿ ಜಾನಪದ ಕಲಾ ತಂಡದಿಂದ
ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ರವರು ದೀಪ ಬೆಳಗಿಸಿ ಟಮ್ಕಿ ಬಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು . ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ .ನೀರು ಅತ್ಯ ಅಮೂಲ್ಯ , ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ ,ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ -ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ, ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದ್ದರು.ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು ಶೇಲಾ ವಲಯದ ಮೇಲ್ಪೀಚಾರಕರಾದ ವನಿತಾ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರ ಸೇವಾ ಪ್ರತಿನಿಧಿ ಪ್ರೇಮ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು.ಊರಿನ ಸದಸ್ಯರು ಪ್ರಗತಿ ಬಂದು ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!