July 23, 2026
ಜಿಲ್ಲಾ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ

ಬಂಟ್ವಾಳ : ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ಇಂದು ನಡೆಯಬೇಕಾಗಿದೆ .ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ ಆಚರಣೆಗಳು ಮಾನಸಿಕವಾಗಿ ಸತ್ಪರಿಣಾಮ ಬೀರುವಂತೆ ಅನುಷ್ಠಾನವಾಗಬೇಕು .ಆರಾಧನಾ ಕೇಂದ್ರಗಳು ಮನಸ್ಸಿಗೆ ಸಾತ್ವಿಕ ಪ್ರಭಾವ ಬೀರುವ ವಾತಾವರಣವನ್ನು ಹೊಂದಿರಬೇಕೆಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ತಿಳಿಸಿದರು.

ಮಾಣಿಲ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ 15ನೇ ಪ್ರತಿಷ್ಠ ವರ್ಧಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಬಿ.ಭುಜಬಲಿ ಪ್ರತಿಷ್ಠಾನದ ವತಿಯಿಂದ ಸಹಕಾರಿ ಸಂಸ್ಥೆ ಸ್ಥಾಪಿಸುವುದು ಉತ್ತಮ ಯೋಜನೆ ಎಂದು ತಿಳಿಸಿದರು.

ಹಿರಿಯರು ಮಾಡುವ ಸೇವಾ ಕಾರ್ಯವು ಮಹತ್ವದಾಗಿದ್ದು ಇದರಿಂದ ಸಮಾಜವು ಪ್ರೇರಣೆ ಪಡೆಯುವಂತಾಗಬೇಕೆಂದು ಪ್ರತಿಷ್ಠಾನದ ಉಪಾಧ್ಯಕ್ಷ ಯಂ. ಜಯರಾಮ ಭಂಡಾರಿ ಧರ್ಮಸ್ಥಳ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಮಾತನಾಡಿ ಡಿಸೆಂಬರನಲ್ಲಿ ಜರಗುವ ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿಸಲು ಸ್ವಯಂ ಕರ್ತವ್ಯವೆಂದು ತಿಳಿದು ಸದಸ್ಯರು ಬದ್ಧತೆಯಿಂದ ಸಹಕರಿಸಬೇಕೆಂದರು.

ಪ್ರತಿಷ್ಠಾನದ ಸದಸ್ಯರಾದ ಅನಾರು ಕೃಷ್ಣಶರ್ಮ ಮತ್ತು ಬಾಲಕೃಷ್ಣ ನಾಯಕ ಕೋಕಳ ಸ್ವಾಮೀಜಿಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿದರು.

ಬೆಳ್ತಂಗಡಿ ಘಟಕದ ಸಂಚಾಲಕ ವಸಂತ ಸುವರ್ಣ , ವಾರಿಜಾ ಸುವರ್ಣ ,ಪುತ್ತೂರು ಘಟಕದ ಚಂದ್ರಶೇಖರ ಆಳ್ವ ಪಡುಮಲೆ,ಭವಾನಿ ಶಂಕರ ಶೆಟ್ಟಿ ಪುತ್ತೂರು, ಸೋಮನಾಥ ಬೇಕಲ್, ಚಂದ್ರಕಲಾ ಎಸ್ ಬೇಕಲ್, ಉದಯಶಂಕರ್ ರೈ ಪುಣಚ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ, ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರತಿಷ್ಠಾನದ ಟ್ರಸ್ಟಿ ದುಗ್ಗಪ್ಪ. ಯನ್ ಕಾರ್ಯಕ್ರಮ ನಿರೂಪಿಸಿದರು.

Related posts

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya
error: Content is protected !!