22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

ಉಜಿರೆ :ಜ್ಞಾನಶ್ರೀ
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿಕರಾವಳಿ ಜಾನಪದ ಕಲಾ ತಂಡದಿಂದ
ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ರವರು ದೀಪ ಬೆಳಗಿಸಿ ಟಮ್ಕಿ ಬಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು . ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ .ನೀರು ಅತ್ಯ ಅಮೂಲ್ಯ , ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ ,ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ -ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ, ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದ್ದರು.ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು ಶೇಲಾ ವಲಯದ ಮೇಲ್ಪೀಚಾರಕರಾದ ವನಿತಾ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರ ಸೇವಾ ಪ್ರತಿನಿಧಿ ಪ್ರೇಮ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು.ಊರಿನ ಸದಸ್ಯರು ಪ್ರಗತಿ ಬಂದು ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya
error: Content is protected !!