March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ನವಿ ಮುಂಬಯಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ವಿ.ಕೆ.ಪೂಜಾರಿ, ಗೌರವ ಕಾರ್ಯಾಧ್ಯಕ್ಷ ರಮೇಶ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹೇರಂಬಾ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಕೆ. ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಎಲ್.ವಿ. ಅಮೀನ್, ಬಿಲ್ಲವ ಚೇಂಬ‌ರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯಾಧ್ಯಕ್ಷ ಎನ್.ಟಿ. ಪೂಜಾರಿ, ಭಾರತ್ ಬ್ಯಾಂಕ್ ಸಂಸ್ಥಾಪಕಾಧ್ಯಕ್ಷ ಭರತ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕಿ ಶಾರದಾ ಸೂರು ಕರ್ಕೇರಾ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಸಪಲ್ಯ, ಚಂದ್ರಶೇಖರ ಬೆಳ್ತಂಗಡಿ, ರವಿ ಎಲ್. ಬಂಗೇರ, ಗಂಗಾಧರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya
error: Content is protected !!