July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya
error: Content is protected !!