July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.


ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2   ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.


ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!