23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.


ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2   ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.


ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!