September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.


ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2   ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.


ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya
error: Content is protected !!