September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!