22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!