April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಚುನಾವಣೆಯು ಮಹತ್ವದ ಪಾತ್ರ ವಹಿಸಿತ್ತು.

ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಮತ್ತು ಶಾಲಾ ಶಿಕ್ಷಕ ಸಮೂಹ ಮತದಾನ ಮಾಡುವುದರ ಮೂಲಕ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ಚುನಾವಣೆಯ ಫಲಿತಾಂಶವಾಗಿ ಮೊಹಮ್ಮದ್ ಶಮ್ಮಾಝ್ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ವಿವಿಧ ಘಟಕಗಳಿಗೆ ನಡೆದ ಚುನಾವಣೆಯಲ್ಲಿ ಶಾಲಾ ಉಪನಾಯಕನಾಗಿ ಝಿಶಾನ್, ಶಿಸ್ತು ಮಂತ್ರಿಯಾಗಿ ತಮೀಝ್ ಉಪನಾಯಕಿಯಾಗಿ ಹಿಫ್ಸಾ ಬೇಗಂ, ಕ್ರೀಡಾ ಮಂತ್ರಿಯಾಗಿ ಹಫೀಜ್, ಉಪನಾಯಕಿಯಾಗಿ ಅಶ್ಫಿಯ, ಆರೋಗ್ಯಮಂತ್ರಿಯಾಗಿ ರಫಾ ಆಸಿಯ, ಉಪನಾಯಕನಾಗಿ ನಫೀಝ್, ಸ್ವಚ್ಛತಾ ಮಂತ್ರಿಯಾಗಿ ಸುಹೈಬ್, ಉಪನಾಯಕನಾಗಿ ಜೆಸ್ವಿನ್ ಜೇಮ್ಸ್, ಗ್ರಂಥಾಲಯದ ಮಂತ್ರಿಯಾಗಿ ರಫಾಝ್, ಉಪನಾಯಕಿಯಾಗಿ ಫಾತಿಮತ್ ಫಾಯಿಝ, ಸಾಂಸ್ಕೃತಿಕ ಮಂತ್ರಿಯಾಗಿ ಶೇಖ್ ಶಿಹಾಬುದ್ದೀನ್, ಉಪನಾಯಕನಾಗಿ ಶಾಖಿಬುಲ್ ಹಸನ್, ಶಿಕ್ಷಣ ಮಂತ್ರಿಯಾಗಿ ಮ!ಜಾಹಫರ್, ನಾಯಕಿಯಾಗಿ ಖದೀಜತ್ ರಂಝಿಯಾ ಆಯ್ಕೆಯಾದರು. ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನೆರವೇರಿತು.

Related posts

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya
error: Content is protected !!