ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ ಪುರೋಹಿತ ವರ್ಗದಿಂದ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿ ಹಾಗೂ ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜ ಶ್ರೀ ಕ್ಷೇತ್ರ ಚಂದ್ರಪುರ ಇವರ ನೇತೃತ್ವದಲ್ಲಿ ಕಲ್ಯಾಣ ಮಂದಿರ ಆರಾಧನೆಯು ನೆರವೇರಿತು..

ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಪ್ರಭುದೇವರ ಜಿನಬಿಂಬವನ್ನು ಅದ್ದೂರಿಯಾಗಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ಸಾಮೂಹಿಕ ಕಲ್ಯಾಣ ಮಂದಿರ ಆರಾಧನೆ ನಡೆದು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ ದಾನಿಗಳಾದ ವಿಜಯಕುಮಾರ್ ಕಣಿಯೂರು, ಸುರೇಂದ್ರ ಹೆಗ್ಡೆ ಕಣಿಯೂರು, ಶ್ರೀಮತಿ ಶಶಿಪ್ರಭಾ ಅಹಿಂಸ ಉಜಿರೆ ಅವರನ್ನು ಆಡಳಿತ ಮಂಡಳಿಯವರು ಗೌರವಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya
error: Content is protected !!