30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

ಹತ್ಯಡ್ಕ: ಆಯುಷ್ ಮಂತ್ರಾಲಯ, ಭಾರತ ಸರಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ-ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ.)ಧರ್ಮಸ್ಥಳ ಇವರ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಚಿತ ಯೋಗ ಶಿಬಿರವು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ಜೂ. 10ರಂದು ಉದ್ಘಾಟನೆಗೊಂಡಿತು.

ಅರಸಿನಮಕ್ಕಿ ಗ್ರಾಮ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಉದ್ಘಾಟಿಸಿ, ಶುಭ ಹಾರೈಸಿದರು. ಹತ್ಯಡ್ಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ಟಿ.ರಾವ್, ಸಿಬ್ಬಂದಿಗಳಾದ ರಂಜಿತ್ ಶೆಟ್ಟಿ,ಕೃಷ್ಣಪ್ಪ ಗೌಡ, ಗಣೇಶ್ ಗೌಡ, ಯೋಗ ತರಬೇತುದಾರರಾದ ಕು. ಚಂದನ ಗೌಡ, ಕು. ನೇಹಾಶ್ರೀ ಉಪಸ್ಥಿತರಿದ್ದರು.

ಕು. ಚಂದನ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಯೋಗ ಶಿಬಿರವು ಜೂ.10ರಿಂದ ಜೂ.21ರ ವರೆಗೆ ಬೆಳಿಗ್ಗೆ 6:30 ರಿಂದ 7:30 ಹಾಗೂ ಸಂಜೆ 5:30 ರಿಂದ 6:30ರ ವರೆಗೆ ನಡೆಯಲ್ಲಿದ್ದು ಆಸಕ್ತರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

Related posts

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!