22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ನವಿ ಮುಂಬಯಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ವಿ.ಕೆ.ಪೂಜಾರಿ, ಗೌರವ ಕಾರ್ಯಾಧ್ಯಕ್ಷ ರಮೇಶ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹೇರಂಬಾ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಕೆ. ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಎಲ್.ವಿ. ಅಮೀನ್, ಬಿಲ್ಲವ ಚೇಂಬ‌ರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯಾಧ್ಯಕ್ಷ ಎನ್.ಟಿ. ಪೂಜಾರಿ, ಭಾರತ್ ಬ್ಯಾಂಕ್ ಸಂಸ್ಥಾಪಕಾಧ್ಯಕ್ಷ ಭರತ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕಿ ಶಾರದಾ ಸೂರು ಕರ್ಕೇರಾ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಸಪಲ್ಯ, ಚಂದ್ರಶೇಖರ ಬೆಳ್ತಂಗಡಿ, ರವಿ ಎಲ್. ಬಂಗೇರ, ಗಂಗಾಧರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!