38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!