25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!