September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya
error: Content is protected !!