22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.


ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2   ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.


ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya
error: Content is protected !!