25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಾನದಲ್ಲಿ 120 ಅಗೇಲು ರಂಗಪೂಜೆ ಸೇವೆಯನ್ನು ಜೂ.10 ರಂದು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಧರ್ಮಸ್ಥಳ ಮಹಾಶಕ್ತಿಕೇಂದ್ರದ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ, ಕೊಕ್ಕಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಬೇಬಿ, ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಸದಸ್ಯರಾದ ಜಾನಕಿ, ಲತಾ, ಪುರುಷೋತ್ತಮ, ಶಕ್ತಿಕೇಂದ್ರದ ಪ್ರಮುಖ ಪ್ರಶಾಂತ್ ಪೂವಾಜೆ, ಬೂತ್ 1ರ ಸಮಿತಿ ಅಧ್ಯಕ್ಷ ಕಿರಣ್, ಕಾರ್ಯದರ್ಶಿ ರವಿ, ಬೂತ್ 2ರ ಸಮಿತಿ ಅಧ್ಯಕ್ಷ ಶಶಿ, ಕಾರ್ಯದರ್ಶಿ ಶ್ರೀಧರ್,
ಬೂತ್ 3ರ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ, ಸುಬ್ರಮಣ್ಯ ತೋಡ್ತಿಲ್ಲಾಯ ಹಾಗೂ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಮುಖರು, ಬಿಜೆಪಿ ಕಾರ್ಯಕರ್ತರು, ಉಪಸ್ಥಿತರಿದ್ದರು.

ನಂತರ ಬಿಜೆಪಿ ಕಾರ್ಯಕರ್ತರು ಕೊಕ್ಕಡ ಪೇಟೆಯಲ್ಲಿ ಸಿಹಿ ತಿಂಡಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!