April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!