September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!