26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಚುನಾವಣೆಯು ಮಹತ್ವದ ಪಾತ್ರ ವಹಿಸಿತ್ತು.

ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಮತ್ತು ಶಾಲಾ ಶಿಕ್ಷಕ ಸಮೂಹ ಮತದಾನ ಮಾಡುವುದರ ಮೂಲಕ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ಚುನಾವಣೆಯ ಫಲಿತಾಂಶವಾಗಿ ಮೊಹಮ್ಮದ್ ಶಮ್ಮಾಝ್ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ವಿವಿಧ ಘಟಕಗಳಿಗೆ ನಡೆದ ಚುನಾವಣೆಯಲ್ಲಿ ಶಾಲಾ ಉಪನಾಯಕನಾಗಿ ಝಿಶಾನ್, ಶಿಸ್ತು ಮಂತ್ರಿಯಾಗಿ ತಮೀಝ್ ಉಪನಾಯಕಿಯಾಗಿ ಹಿಫ್ಸಾ ಬೇಗಂ, ಕ್ರೀಡಾ ಮಂತ್ರಿಯಾಗಿ ಹಫೀಜ್, ಉಪನಾಯಕಿಯಾಗಿ ಅಶ್ಫಿಯ, ಆರೋಗ್ಯಮಂತ್ರಿಯಾಗಿ ರಫಾ ಆಸಿಯ, ಉಪನಾಯಕನಾಗಿ ನಫೀಝ್, ಸ್ವಚ್ಛತಾ ಮಂತ್ರಿಯಾಗಿ ಸುಹೈಬ್, ಉಪನಾಯಕನಾಗಿ ಜೆಸ್ವಿನ್ ಜೇಮ್ಸ್, ಗ್ರಂಥಾಲಯದ ಮಂತ್ರಿಯಾಗಿ ರಫಾಝ್, ಉಪನಾಯಕಿಯಾಗಿ ಫಾತಿಮತ್ ಫಾಯಿಝ, ಸಾಂಸ್ಕೃತಿಕ ಮಂತ್ರಿಯಾಗಿ ಶೇಖ್ ಶಿಹಾಬುದ್ದೀನ್, ಉಪನಾಯಕನಾಗಿ ಶಾಖಿಬುಲ್ ಹಸನ್, ಶಿಕ್ಷಣ ಮಂತ್ರಿಯಾಗಿ ಮ!ಜಾಹಫರ್, ನಾಯಕಿಯಾಗಿ ಖದೀಜತ್ ರಂಝಿಯಾ ಆಯ್ಕೆಯಾದರು. ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನೆರವೇರಿತು.

Related posts

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ