April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಮಹೇಶ್ ರವರು ದೀಪ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ ನೀರು ಅತ್ಯಅಮೂಲ್ಯ, ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ, ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ -ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ, ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದರು. ವಲಯದ ಮೇಲ್ಪೀಚಾರಕರಾದ ಸುಶಾಂತ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಸೇವಾಪ್ರತಿನಿಧಿ ರತ್ನಾವತಿ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು.ಊರಿನ ಸದಸ್ಯರು ಸ್ವಸಹಾಯ ತಂಡದ ಸದಸ್ಯರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!