ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಸರಸ್ವತಿ ಭಜನಾ ಮಂಡಳಿ ರಿ. ವಿವೇಕಾನಂದ ನಗರ ಹಳೇಪೇಟೆ ಲಾಯಿಲ, ಉಜಿರೆ ಇದರ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜೂ.7 ರಂದು ಅಂಗನವಾಡಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ವಹಿಸಿದರು.

ಕಾರ್ಯಕ್ರಮದಲ್ಲಿ ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ.ವೈ ರವಿ ಕುಂಡದಬೆಟ್ಟು, ಉಜಿರೆ ಎಸ್.ಪಿ. ಆಯಿಲ್ ಮಿಲ್ ಮಾಲಕ ಶಿವಕಾಂತ ಗೌಡ, ವಿಮಲ್ ರೈಸ್ ಮಿಲ್ ಮಾಲಕ ದಾಮೋದ‌ರ್, ಚಿತ್ತರಂಜನ್ ಜೈನ್, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಈ ವೇಳೆ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ರವರು ಭಜನಾ ಮಂಡಳಿ ಅಭಿವೃದ್ಧಿಯ ನಿಟ್ಟಿನಲ್ಲಿ ದಾನಿಗಳ ಸಹಕಾರವನ್ನು ಕೋರಿದ್ದಾರೆ.

Leave a Comment

error: Content is protected !!