25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ ಪುರೋಹಿತ ವರ್ಗದಿಂದ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿ ಹಾಗೂ ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜ ಶ್ರೀ ಕ್ಷೇತ್ರ ಚಂದ್ರಪುರ ಇವರ ನೇತೃತ್ವದಲ್ಲಿ ಕಲ್ಯಾಣ ಮಂದಿರ ಆರಾಧನೆಯು ನೆರವೇರಿತು..

ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಪ್ರಭುದೇವರ ಜಿನಬಿಂಬವನ್ನು ಅದ್ದೂರಿಯಾಗಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ಸಾಮೂಹಿಕ ಕಲ್ಯಾಣ ಮಂದಿರ ಆರಾಧನೆ ನಡೆದು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ ದಾನಿಗಳಾದ ವಿಜಯಕುಮಾರ್ ಕಣಿಯೂರು, ಸುರೇಂದ್ರ ಹೆಗ್ಡೆ ಕಣಿಯೂರು, ಶ್ರೀಮತಿ ಶಶಿಪ್ರಭಾ ಅಹಿಂಸ ಉಜಿರೆ ಅವರನ್ನು ಆಡಳಿತ ಮಂಡಳಿಯವರು ಗೌರವಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!