23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

ಹತ್ಯಡ್ಕ: ಆಯುಷ್ ಮಂತ್ರಾಲಯ, ಭಾರತ ಸರಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ-ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ.)ಧರ್ಮಸ್ಥಳ ಇವರ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಚಿತ ಯೋಗ ಶಿಬಿರವು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ಜೂ. 10ರಂದು ಉದ್ಘಾಟನೆಗೊಂಡಿತು.

ಅರಸಿನಮಕ್ಕಿ ಗ್ರಾಮ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಉದ್ಘಾಟಿಸಿ, ಶುಭ ಹಾರೈಸಿದರು. ಹತ್ಯಡ್ಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ಟಿ.ರಾವ್, ಸಿಬ್ಬಂದಿಗಳಾದ ರಂಜಿತ್ ಶೆಟ್ಟಿ,ಕೃಷ್ಣಪ್ಪ ಗೌಡ, ಗಣೇಶ್ ಗೌಡ, ಯೋಗ ತರಬೇತುದಾರರಾದ ಕು. ಚಂದನ ಗೌಡ, ಕು. ನೇಹಾಶ್ರೀ ಉಪಸ್ಥಿತರಿದ್ದರು.

ಕು. ಚಂದನ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಯೋಗ ಶಿಬಿರವು ಜೂ.10ರಿಂದ ಜೂ.21ರ ವರೆಗೆ ಬೆಳಿಗ್ಗೆ 6:30 ರಿಂದ 7:30 ಹಾಗೂ ಸಂಜೆ 5:30 ರಿಂದ 6:30ರ ವರೆಗೆ ನಡೆಯಲ್ಲಿದ್ದು ಆಸಕ್ತರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

Related posts

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya
error: Content is protected !!