22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

ಹತ್ಯಡ್ಕ: ಆಯುಷ್ ಮಂತ್ರಾಲಯ, ಭಾರತ ಸರಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ-ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ.)ಧರ್ಮಸ್ಥಳ ಇವರ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಚಿತ ಯೋಗ ಶಿಬಿರವು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ಜೂ. 10ರಂದು ಉದ್ಘಾಟನೆಗೊಂಡಿತು.

ಅರಸಿನಮಕ್ಕಿ ಗ್ರಾಮ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಉದ್ಘಾಟಿಸಿ, ಶುಭ ಹಾರೈಸಿದರು. ಹತ್ಯಡ್ಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ಟಿ.ರಾವ್, ಸಿಬ್ಬಂದಿಗಳಾದ ರಂಜಿತ್ ಶೆಟ್ಟಿ,ಕೃಷ್ಣಪ್ಪ ಗೌಡ, ಗಣೇಶ್ ಗೌಡ, ಯೋಗ ತರಬೇತುದಾರರಾದ ಕು. ಚಂದನ ಗೌಡ, ಕು. ನೇಹಾಶ್ರೀ ಉಪಸ್ಥಿತರಿದ್ದರು.

ಕು. ಚಂದನ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಯೋಗ ಶಿಬಿರವು ಜೂ.10ರಿಂದ ಜೂ.21ರ ವರೆಗೆ ಬೆಳಿಗ್ಗೆ 6:30 ರಿಂದ 7:30 ಹಾಗೂ ಸಂಜೆ 5:30 ರಿಂದ 6:30ರ ವರೆಗೆ ನಡೆಯಲ್ಲಿದ್ದು ಆಸಕ್ತರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

Related posts

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
error: Content is protected !!