September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ನವಿ ಮುಂಬಯಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ವಿ.ಕೆ.ಪೂಜಾರಿ, ಗೌರವ ಕಾರ್ಯಾಧ್ಯಕ್ಷ ರಮೇಶ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹೇರಂಬಾ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಕೆ. ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಎಲ್.ವಿ. ಅಮೀನ್, ಬಿಲ್ಲವ ಚೇಂಬ‌ರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯಾಧ್ಯಕ್ಷ ಎನ್.ಟಿ. ಪೂಜಾರಿ, ಭಾರತ್ ಬ್ಯಾಂಕ್ ಸಂಸ್ಥಾಪಕಾಧ್ಯಕ್ಷ ಭರತ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕಿ ಶಾರದಾ ಸೂರು ಕರ್ಕೇರಾ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಸಪಲ್ಯ, ಚಂದ್ರಶೇಖರ ಬೆಳ್ತಂಗಡಿ, ರವಿ ಎಲ್. ಬಂಗೇರ, ಗಂಗಾಧರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಸ್ಟ್ ಎಂಎಲ್ಎ ಅವಾರ್ಡ್ ಹಾಗೂ ಪರಿಮಳ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ವಿಶ್ವಬ್ರಾಹ್ಮಣ ಸಮಾಜದ ಸಂಘಟನೆಗಳ ವತಿಯಿಂದ ಅಭಿನಂದನೆ

Suddi Udaya
error: Content is protected !!