September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
error: Content is protected !!