July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya
error: Content is protected !!