25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!