22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.


ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2   ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.


ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!