ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

Updated on:

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Comment

error: Content is protected !!