September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya
error: Content is protected !!