23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!