25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ತಿನಿಸು ವಿತರಿಸುವ ಮೂಲಕ ಸಂಭ್ರಮ ಆಚರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಮತಿ ಸುಮಿತ್ರಾ, ಬೂತ್ ಅಧ್ಯಕ್ಷ , ಕಾರ್ಯದರ್ಶಿ ಸಂಜೀವ ಗೌಡ, ನಿತೇಶ್ ಕಡಿತ್ಯಾರು, ರಕ್ಷಿತ್ ಮೊಯ್ಲಿ, ಸಚಿನ್ ಬಂಗಾಡಿ, ಪ್ರತೀಶ್ ಕಡಿತ್ಯಾರು, ಪಿ.ಎಡಿ.ಬ್ಯಾಂಕ್ ಉಪಾಧ್ಯಕ್ಷ ವಾಮನ ಗೌಡ, ರೈತ ಮೋರ್ಚಾ ಉಪಾಧ್ಯಕ್ಷ ಪಳನಿ ಸ್ವಾಮಿ, ಯುವ ಮೋರ್ಚಾ ಸಂಚಾಲಕರಾದ ಸಂತೋಷ್ ಕುಮಾರ್ ಉಂಬೆಜೆ, ಚಂದ್ರಶೇಖರ ಪಡೆಂಕ್ಕಲ್, ಸುರಪ್ಪ ಅಂತರದಡ್ಡು, ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವವರು ಪ್ರಮುಖರು, ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!