22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಚುನಾವಣೆಯು ಮಹತ್ವದ ಪಾತ್ರ ವಹಿಸಿತ್ತು.

ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಮತ್ತು ಶಾಲಾ ಶಿಕ್ಷಕ ಸಮೂಹ ಮತದಾನ ಮಾಡುವುದರ ಮೂಲಕ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ಚುನಾವಣೆಯ ಫಲಿತಾಂಶವಾಗಿ ಮೊಹಮ್ಮದ್ ಶಮ್ಮಾಝ್ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ವಿವಿಧ ಘಟಕಗಳಿಗೆ ನಡೆದ ಚುನಾವಣೆಯಲ್ಲಿ ಶಾಲಾ ಉಪನಾಯಕನಾಗಿ ಝಿಶಾನ್, ಶಿಸ್ತು ಮಂತ್ರಿಯಾಗಿ ತಮೀಝ್ ಉಪನಾಯಕಿಯಾಗಿ ಹಿಫ್ಸಾ ಬೇಗಂ, ಕ್ರೀಡಾ ಮಂತ್ರಿಯಾಗಿ ಹಫೀಜ್, ಉಪನಾಯಕಿಯಾಗಿ ಅಶ್ಫಿಯ, ಆರೋಗ್ಯಮಂತ್ರಿಯಾಗಿ ರಫಾ ಆಸಿಯ, ಉಪನಾಯಕನಾಗಿ ನಫೀಝ್, ಸ್ವಚ್ಛತಾ ಮಂತ್ರಿಯಾಗಿ ಸುಹೈಬ್, ಉಪನಾಯಕನಾಗಿ ಜೆಸ್ವಿನ್ ಜೇಮ್ಸ್, ಗ್ರಂಥಾಲಯದ ಮಂತ್ರಿಯಾಗಿ ರಫಾಝ್, ಉಪನಾಯಕಿಯಾಗಿ ಫಾತಿಮತ್ ಫಾಯಿಝ, ಸಾಂಸ್ಕೃತಿಕ ಮಂತ್ರಿಯಾಗಿ ಶೇಖ್ ಶಿಹಾಬುದ್ದೀನ್, ಉಪನಾಯಕನಾಗಿ ಶಾಖಿಬುಲ್ ಹಸನ್, ಶಿಕ್ಷಣ ಮಂತ್ರಿಯಾಗಿ ಮ!ಜಾಹಫರ್, ನಾಯಕಿಯಾಗಿ ಖದೀಜತ್ ರಂಝಿಯಾ ಆಯ್ಕೆಯಾದರು. ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನೆರವೇರಿತು.

Related posts

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!