23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya
error: Content is protected !!