ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!