July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಅನಂದೋತ್ಸವ ಶಿಬಿರ’ ಎಂಬ “ಯೋಗ ಮತ್ತು ಪ್ರಾಣಾಯಾಮ ಶಿಬಿರ” ಜೂನ್ 18 ರಿಂದ ಜೂನ್ 23ರ ವರೆಗೆ ಸಂಜೆ 5.30 ರಿಂದ 8 ರವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180ಕ್ಕೂ ಹೆಚ್ಚು ದೇಶಗಲ್ಲಿ ‘ಜೀವನ ಕಲೆ ಪ್ರತೀಷ್ಠಾನ ‘ ಜನಪ್ರಿಯತೆಯನ್ನು ಗಳಿಸಿದೆ. ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!