September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

ಬೆಳ್ತಂಗಡಿ: ದೇವರನ್ನು ಅತಿ ಸುಲಭವಾಗಿ ಒಲಿಸಿಕೊಳ್ಳಲು ಸುಲಭ ವಿಧಾನ ಎಂದರೆ ಅದು ಭಜನೆ ಆದುದರಿಂದ ಭಜನೆ ಎನ್ನುವುದು ಶ್ರದ್ಧಾಭಕ್ತಿಯಿಂದ ಕೂಡಿರಬೇಕು ವಿವಿಧತೆಯ ಭಜನೆಯಲ್ಲಿ ಏಕತೆಯನ್ನು ಕಾಣಬೇಕು ಮಾತ್ರವಲ್ಲದೇ ತಾಲೂಕಿನ ಒಳಗಡೆ ನಡೆಯುವಂತಹ ಭಜನಾ ಕಾರ್ಯಕ್ರಮಗಳಲ್ಲಿ ಹಾಗೂ ಭಜಕರಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದಕೋಸ್ಕರ ಹಾಗೂ ಮುಂದಿನ ದಿನಗಳಲ್ಲಿ ನಾವು ಶ್ರದ್ಧಾ ಭಕ್ತಿಯಿಂದ ಮಾಡುವಂತಹ ಭಜನೆಯಲ್ಲಿಯೂ ಕೂಡ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು ಎನ್ನುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಭಜನಾ ಪರಿಷತ್ತಿನ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರಥಮ ಬಾರಿಗೆ ತಾಲೂಕಿನ ಒಳಗಡೆ ಭಜನಾ ತರಬೇತಿ ನೀಡುತ್ತಿರುವ ಎಲ್ಲಾ ತರಬೇತಿದಾರರುಗಳ ಸಭೆಯನ್ನು ನಡೆಸಲಾಯಿತು. ಮಾತ್ರವಲ್ಲದೆ ಕುಣಿತ ಭಜನೆಯಲ್ಲಿ ಕೆಲವೊಂದು ನಿಬಂಧನೆಗಳನ್ನು ಅನುಷ್ಠಾನಗೊಳಿಸುವುದಕೋಸ್ಕರ ತಾಲೂಕಿನಲ್ಲಿ ಕುಣಿತ ಭಜನೆಯ ತರಬೇತಿದಾರರ ಪ್ರಥಮ ಸಮಿತಿಯನ್ನು ರಚಿಸಲಾಯಿತು.


ಈ ಸಭೆ ಅಧ್ಯಕ್ಷತೆಯನ್ನು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ ಭಟ್ ಕಜೆ ಇವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಾಜಿ, ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು, ಸುರೇಂದ್ರ ಯೋಜನಾಧಿಕಾರಿ ಬೆಳ್ತಂಗಡಿ ವಲಯ, ಕೃಷಿ ವಿಭಾಗದ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.


ಸಭೆಯಲ್ಲಿ ಭಜನಾ ಪರಿಷತ್ತಿನ ಸಂಯೋಜಕರುಗಳು ಹಾಗೂ ತಾಲೂಕಿನ ಭಜನಾ ಕುಣಿತ ಭಜನೆಯ ತರಬೇತಿದಾರರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!