25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!