September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ತಾ.ಪಂ. , ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!