July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರ
ಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ ( ಪಬ್ಲಿಕ್ ಪ್ರಾಸಿಕೂಟರ್) ಆಗಿರುವ ಮಹಮ್ಮದ್ ಶೌಕತ್ ಅಲಿ ಹಾಗೂ ಶಿಕ್ಷಕಿ ಸಫಿಯಾ ದಂಪತಿಯ ಪುತ್ರಿ ಯಾಗಿರುವ ಸಿಮ್ರಾ ಫರ್ವಿನ್ ಕಲಿಕೆ ಮತ್ತು ಕಲಿಕೇತರ ವಿಷಯದಲ್ಲೂ ಪ್ರತಿಭಾನ್ವಿತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಅತ್ತೂರು ಚಾಯಬ್ಬ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!