September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya
error: Content is protected !!