March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya
error: Content is protected !!