37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಜೂ.16 ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.


ಉಚಿತ ಹಿಯರಿಂಗ್ ಟೆಸ್ಟ್ (ಉಚಿತ ಶ್ರವಣ ಪರೀಕ್ಷೆ), ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವೆರ್‍ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು- ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ MBBS, MS (ENT & HNS) Fellowship in Head & Neck Oncologist ಇವರು ರೋಗ ತಪಾಸಣೆ ನಡೆಸಲಿದ್ದಾರೆ. ಡಾ| ರೋಹನ್ ಎಂ. ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದಾರೆ. ಇವರು ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!