22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಜೂ.16 ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.


ಉಚಿತ ಹಿಯರಿಂಗ್ ಟೆಸ್ಟ್ (ಉಚಿತ ಶ್ರವಣ ಪರೀಕ್ಷೆ), ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವೆರ್‍ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು- ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ MBBS, MS (ENT & HNS) Fellowship in Head & Neck Oncologist ಇವರು ರೋಗ ತಪಾಸಣೆ ನಡೆಸಲಿದ್ದಾರೆ. ಡಾ| ರೋಹನ್ ಎಂ. ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದಾರೆ. ಇವರು ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya
error: Content is protected !!