24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಅನಂದೋತ್ಸವ ಶಿಬಿರ’ ಎಂಬ “ಯೋಗ ಮತ್ತು ಪ್ರಾಣಾಯಾಮ ಶಿಬಿರ” ಜೂನ್ 18 ರಿಂದ ಜೂನ್ 23ರ ವರೆಗೆ ಸಂಜೆ 5.30 ರಿಂದ 8 ರವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180ಕ್ಕೂ ಹೆಚ್ಚು ದೇಶಗಲ್ಲಿ ‘ಜೀವನ ಕಲೆ ಪ್ರತೀಷ್ಠಾನ ‘ ಜನಪ್ರಿಯತೆಯನ್ನು ಗಳಿಸಿದೆ. ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya
error: Content is protected !!