26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಅನಂದೋತ್ಸವ ಶಿಬಿರ’ ಎಂಬ “ಯೋಗ ಮತ್ತು ಪ್ರಾಣಾಯಾಮ ಶಿಬಿರ” ಜೂನ್ 18 ರಿಂದ ಜೂನ್ 23ರ ವರೆಗೆ ಸಂಜೆ 5.30 ರಿಂದ 8 ರವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180ಕ್ಕೂ ಹೆಚ್ಚು ದೇಶಗಲ್ಲಿ ‘ಜೀವನ ಕಲೆ ಪ್ರತೀಷ್ಠಾನ ‘ ಜನಪ್ರಿಯತೆಯನ್ನು ಗಳಿಸಿದೆ. ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!